ರಾಯಪುರದಲ್ಲಿ ನಡೆದ ಭಾರತ vs ನ್ಯೂಜಿಲೆಂಡ್ ಎರಡನೇ ಟಿ20 ಪಂದ್ಯಕ್ಕೂ ಮುನ್ನ ಒಂದು ಅಚ್ಚರಿಯ ಘಟನೆ ನಡೆದಿದೆ. ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಮಾಜಿ ಕ್ರಿಕೆಟಿಗ, ಸದ್ಯ ಕ್ರಿಕೆಟ್ ವಿಶ್ಲೇಷಕರಾಗಿರುವ ಮುರಳಿ ಕಾರ್ತಿಕ್ ನಡುವೆ ನಡೆದ ಮಾತಿನ ಚಕಮಕಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಮುರಳಿ ಕಾರ್ತಿಕ್ ಯಾವುದೋ ಒಂದು ವಿಚಾರದ ಬಗ್ಗೆ ಹಾರ್ದಿಕ್ ಪಾಂಡ್ಯ ಅವರಿಗೆ ವಿವರಿಸುತ್ತಾ ಸಮಾಧಾನ ಪಡಿಸುವ ಪ್ರಯತ್ನ ಮಾಡುತ್ತಿರುವುದು ಕಾಣುತ್ತದೆ. ಆದರೆ ಹಾರ್ದಿಕ್ ಪಾಂಡ್ಯ ಅವರ ಪ್ರತಿಕ್ರಿಯೆ ಸ್ವಲ್ಪ ತೀವ್ರವಾಗಿದ್ದು, ಇಬ್ಬರ ನಡುವೆ ಮಾತಿನ ಬಿಸಿ ಬಿಸಿ ವಾಗ್ವಾದ ನಡೆದಂತೆ ಕಾಣುತ್ತದೆ. ಈ ದೃಶ್ಯವನ್ನು ಕಂಡ ನೆಟಿಜನ್ಸ್ ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದು, ವಿಡಿಯೋ ಕ್ಷಣಾರ್ಧದಲ್ಲಿ ವೈರಲ್ ಆಗಿದೆ.
ಪಂದ್ಯಕ್ಕೂ ಮುನ್ನ ಇಂತಹ ಘಟನೆ ನಡೆಯುತ್ತಿದ್ದಂತೆ, ಅಭಿಮಾನಿಗಳು ಇದರ ಹಿಂದೆ ಇರುವ ನಿಜವಾದ ಕಾರಣವೇನು ಎಂಬುದರ ಬಗ್ಗೆ ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ. ಈ ವಾಗ್ವಾದ ಕೇವಲ ಚರ್ಚೆಯಷ್ಟೇ ಆಗಿತ್ತಾ? ಅಥವಾ ಇನ್ನೇನಾದರೂ ಒಳಹುಳಿಯ ಕಥೆಯಿದೆಯಾ? ಅನ್ನೋದು ಈಗ ಸೋಶಿಯಲ್ ಮೀಡಿಯಾದ ಹಾಟ್ ಟಾಪಿಕ್ ಆಗಿದೆ.